ಕುಟುಂಬ ಕಲಹ ಕೊಲೆಯಲ್ಲಿ ಅಂತ್ಯ
ಬೆಂಗಳೂರು ನಗರದಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು, ದೇಹವನ್ನು ಸೂಟ್ಕೇಸ್ನಲ್ಲಿ ತುಂಬಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಹುಳಿಮಾವು ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಡನ ಕೈಯಲ್ಲಿ ಪತ್ನಿಯ ದುರ್ಮರಣ
ಮಹಾರಾಷ್ಟ್ರ ಮೂಲದ ದಂಪತಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ದಂಪತಿ ನಡುವೆ ಕಳೆದ ಕೆಲವು ದಿನಗಳಿಂದ ಜಗಳ ನಡೆಯುತ್ತಿದ್ದು, ತಡರಾತ್ರಿ ವೇಳೆಯೂ ಅವರ ಜಗಳ ಪಕ್ಕದ ಮನೆಯವರಿಗೆ ಕೇಳಿಸುತ್ತಿತ್ತು. ಕೊನೆಗೂ ಗಂಡ ರಾಕೇಶ್ ರಾಜೇಂದ್ರ ತನ್ನ ಹೆಂಡತಿ ಗೌರಿ ಅನಿಲ್ ಸಾಂಬೆಕರ್ ಅವರನ್ನು ಬರ್ಬರವಾಗಿ ಕೊಲೆ ಮಾಡಿ, ದೇಹವನ್ನು ತುಂಡರಿಸಿ ಸೂಟ್ಕೇಸ್ನಲ್ಲಿ ತುಂಬಿದ್ದಾನೆ.
ಕೊಲೆ ಬಳಿಕ ಪಶ್ಚಾತ್ತಾಪ – ಪತ್ನಿ ಮನೆಯವರಿಗೆ ಮಾಹಿತಿ
ಘಟನೆಯ ನಂತರ, ರಾಕೇಶ್ಗಿಗೆ ಪಶ್ಚಾತ್ತಾಪ ಉಂಟಾಗಿದ್ದು, ಅವನು ತನ್ನ ಹೆಂಡತಿ ಮನೆಯವರಿಗೆ ಕರೆ ಮಾಡಿ ಹತ್ಯೆ ಮಾಡಿದ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಗೌರಿಯ ಕುಟುಂಬ ಮುಂಬೈ ಪೊಲೀಸರನ್ನು ಸಂಪರ್ಕಿಸಿದ್ದು, ಮುಂಬೈ ಪೊಲೀಸರು ಬೆಂಗಳೂರಿನ ಹುಳಿಮಾವು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
ಪೊಲೀಸರು ತಕ್ಷಣದ ಕ್ರಮ – ಆರೋಪಿಗೆ ಹುಡುಕಾಟ
ಹುಳಿಮಾವು ಪೊಲೀಸರು ಮಾಹಿತಿ ಪಡೆಯುತ್ತಿದ್ದಂತೆಯೇ ತಕ್ಷಣವೇ ಘಟನಾ ಸ್ಥಳಕ್ಕೆ ದೌಡಾಯಿಸಿ, ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಈ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ತನಿಖೆ ಪ್ರಾರಂಭಿಸಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ರಾಕೇಶ್ನನ್ನು ವಶಕ್ಕೆ ಪಡೆಯಲು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಘಟನೆ ಕುರಿತಂತೆ ಹೆಚ್ಚುವರಿ ತನಿಖೆ
ಈ ಘಟನೆ ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದ್ದು, ಪೊಲೀಸರು ದಂಪತಿಗಳ ನಡುವಿನ ಪಾಶ್ವಭೂಮಿಯನ್ನು ವಿವರವಾಗಿ ಪರಿಶೀಲಿಸುತ್ತಿದ್ದಾರೆ. ಇದಕ್ಕೆ ನಿಖರ ಕಾರಣ ಏನೆಂದು ತಿಳಿಯಲು ತನಿಖೆ ಮುಂದುವರಿಸಲಾಗುತ್ತಿದೆ. ಇಂತಹ ಘಟನೆಯನ್ನು ತಡೆಯಲು ಸಂಬಂಧಿತ ಅಧಿಕಾರಿಗಳು ಮುಂದಾಗಬೇಕಾಗಿದೆ.